ಉಡುಪಿ : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಹೆಬ್ರಿ, ಗ್ರಾಮ ಪಂಚಾಯತ್ ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ಬೇರಿ ಉತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಸಂಜೀವಿನಿ ಮಾರಾಟ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಬ್ರಿ ರಾಮ ಮಂದಿರದ ಮುಂಭಾಗದಲ್ಲಿ ಫೆಬ್ರವರಿ 13 ರಿಂದ 15 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಹೆಬ್ರಿ ಹನಿ ಇತ್ಯಾದಿ ಉತ್ಪನ್ನಗಳು ಲಭ್ಯವಿರುತ್ತದೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೀವಿನಿ ಮಹಿಳೆಯರು, ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳನ್ನು ಹಮ್ಮಿಕೊಂಡಿದ್ದು, ಈ ಎಲ್ಲಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹ ನೀಡುವಂತೆ ಹೆಬ್ರಿ ತಾಲೂಕು ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.
Local Business
ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000 ಲೀಟರ್ ಮಾರಾಟವಾಗುತ್ತಿದ್ದು ಪ್ರಸ್ತುತ 1,10,000 ಲೀಟರ್ ಶೇಖರಣೆಯಾಗುತ್ತಿದೆ. ಕಾರಣ ನಿಯಮ ಮೀರಿ ಹೊರ ಜಿಲ್ಲೆಗಳಿಗೆ ಜಾನುವಾರು ಮಾರಾಟ ಮಾಡುತ್ತಿದ್ದು ಇದರಿಂದ ಹಾಲು ಶೇಖರಣೆ ಕಡಿಮೆಯಾಗುತ್ತಿದೆ.
ಗ್ರಾಹಕರಿಗೆ ಬೇಕಾಗುವಷ್ಟು ಹಾಲು ಮತ್ತು ಹಾಲಿನ ಉತ್ಪನ್ನ ನೀಡಲು ಸಾಧ್ಯವಾಗುತ್ತಿಲ್ಲ. ದಿನೇದಿನೇ ಹಾಲು ಶೇಖರಣೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ರಾಸುಗಳನ್ನು ಮಾರಾಟ ಮಾಡುವ ಸಂದರ್ಭದಲ್ಲಿ ನಿಯಮ ಸಡಿಲಗೊಳಿಸಬಾರದೆಂದು ಹಾಗೂ ರಾಸು ಕಳ್ಳತನವಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಲ್ಲಾಳಿಗಳು ಮನೆಮನೆಗೆ ಬಂದು ರಾಸು ಮಾರಾಟಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ತಹಶೀಲ್ದಾರರು, ಪೋಲಿಸ್ ನಿರೀಕ್ಷಕರು ಮತ್ತು ಪಶುವೈದ್ಯಾಧಿಕಾರಿಯವರು ಕಾನೂನು ಪ್ರಕಾರ ಜಾನುವಾರು ಸಾಗಾಟ ಮಾಡಲು ಅನುಮತಿಯನ್ನು ನೀಡುವಂತೆ ಬ್ರಹ್ಮಾವರ ತಾಲೂಕು ದಂಡಾಧಿಕಾರಿಗಳಿಗೆ ಸೇರಿದಂತೆ ಬ್ರಹ್ಮಾವರ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್ರವರಿಗೆ ಮನವಿ ನೀಡಲಾಯಿತು.
ಬ್ರಹ್ಮಾವರ ಹಾಲು ನೌಕರರ ತಾಲೂಕು ಅಧ್ಯಕ್ಷ ರಾಕೇಶ್ ನಾಯಕ್ ಶಿರಿಯಾರ, ಹಂದಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸರಸ್ವತಿ ಮೊದಲಾದವರು ಉಪಸ್ಥಿತರಿದ್ದರು.