ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ತೆರಿಗೆ, ಇಂಧನ ವಲಯ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ನಿಯಂತ್ರಕ ಸುಧಾರಣೆಗಳು ಹೀಗೆ 6 ಕ್ಷೇತ್ರಗಳನ್ನಾಗಿ ವಿಭಾಗಿಸಿ ಮಂಡಿಸಲಾದ ಬಜೆಟ್ ಜನಸ್ನೇಹಿಯಾಗಿದೆ. ಮೀನುಗಾರಿಕೆಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಕ್ಯಾನ್ಸರ್ ಪೀಡಿತರಿಗೆ, ರೈತರಿಗೆ ಈ ಬಜೆಟ್ ವರದಾನವಾಗಿದೆ. 12 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿರುವುದು ಕ್ರಾಂತಿಕಾರಕ ನಿರ್ಧಾರವಾಗಿದೆ. ಇದು ಮಧ್ಯಮ ವರ್ಗದವರಿಗೆ ವರವಾಗಿ ಪರಿಣಮಿಸಲಿದೆ ಎಂದವರು ತಿಳಿಸಿದ್ದಾರೆ.