Women Empowerment
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ [ಮಾಹೆ]ನ ಎರಡು ಸಾಕ್ಷ್ಯ ಚಿತ್ರಗಳು ಕೇರಳದ ತ್ರಿಶೂರಿನ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವದ 8ನೆಯ ಆವೃತ್ತಿಗೆ ಅಧಿಕೃತವಾಗಿ ಆಯ್ಕೆಯಾಗುವುದರೊಂದಿಗೆ ಸಂಸ್ಥೆಯ ಮಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ.

ಐಎಫ್ಎಫ್ಎಫ್ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮವಾಗಿದ್ದು ಅದು ಸಿನೆಮಾದ ಮೂಲಕ ಜಾನಪದ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉತ್ಸವವಾಗಿದೆ. ಈ ಸಲದ ಚಿತ್ರೋತ್ಸವಕ್ಕೆ ಜಗತ್ತಿನಾದ್ಯಂತ ಸುಮಾರು 800 ಚಿತ್ರಗಳು ಪ್ರವೇಶ ಬಯಸಿದ್ದು, ಈ ವರ್ಷ ಜಾನಪದ-ಆಧಾರಿತ ಕಥಾನಿರೂಪಣೆಯ ಸಮೃದ್ಧ ವೈವಿಧ್ಯವಿರುವ ಸುಮಾರು 200 ಚಿತ್ರಗಳನ್ನು ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿದೆ.
2025 ಜನವರಿ 10 ರಿಂದ 15ರ ನಡುವೆ ಮಾಹೆಯ ಸಾಕ್ಷ್ಯಚಿತ್ರಗಳು ಪ್ರದರ್ಶನಗೊಳ್ಳುತ್ತಿರುವುದು ಅಭಿಮಾನದ ಸಂಗತಿಯಾಗಿದೆ. ಈ ಚಿತ್ರೋತ್ಸವವನ್ನು ತ್ರಿಶೂರಿನ ಅಂತಾರಾಷ್ಟ್ರೀಯ ಚಿತ್ರೋತ್ಸವ, ಭೌಮನ್ ಸೋಶಿಯಲ್ ಇನೀಶಿಯೇಟಿವ್, ತ್ರಿಶೂರಿನ ಸೆಂಟ್ ಥಾಮಸ್ ಕಾಲೇಜಿನ ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಮತ್ತು ಇಂಟರ್ನ್ಯಾಶನಲ್ ಫೋಕ್ ಫಿಲ್ಮ್ಸ್ ಇಂಡಿಯಾ ಆಯೋಜಿಸುತ್ತಿವೆ.
ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾದ ‘ಪಿಲಿವೇಷ ಆಫ್ ತುಳುನಾಡು’ ಮತ್ತು ‘ಸತ್ಯೊದ ಸಿರಿ : ಎ ವುಮನ್ಸ್ ಟೇಲ್’ ಸಾಕ್ಷ್ಯಚಿತ್ರಗಳು ಪ್ರಾದೇಶಿಕವಾದ ಜೀವಂತಿಕೆಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದ ಪ್ರೇಕ್ಷಕರಿಗೆ ತಲುಪಿಸುವ ಮಾಹೆಯ ಬದ್ಧತೆಗೆ ಸಾಕ್ಷಿಗಳಾಗಿವೆ.
ಸಿಐಐ ಪ್ರಶಸ್ತಿ ಪ್ರದಾನ ಸಮಾರಂಭ – “ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್” STEM 2024ರಲ್ಲಿ ಮಹಿಳೆಯರಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದು
ಮಣಿಪಾಲ : ನವೆಂಬರ್ 19, 2024 ರಂದು, ಪ್ರತಿಷ್ಠಿತ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (CII) ಪ್ರಶಸ್ತಿಗಳು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅನ್ನು STEM (ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ)ನಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಅತ್ಯುತ್ತಮ ಕೊಡುಗೆಗಳಿಗಾಗಿ ಗುರುತಿಸಿದೆ. ಈ ಸಂಸ್ಥೆಯು STEM 2024ರಲ್ಲಿ ಮಹಿಳೆಯರಲ್ಲಿ ಉತ್ತಮ ಸಾಧನೆ ತೋರುತ್ತಿರುವ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿ ಗೌರವಿಸಲ್ಪಟ್ಟಿದೆ. ಈ ಮಾನ್ಯತೆ MAHEಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಅಂತರ್ಗತ ಶೈಕ್ಷಣಿಕ ವಾತಾವರಣವನ್ನು ಮತ್ತು STEM ಕ್ಷೇತ್ರಗಳಲ್ಲಿ ಲಿಂಗ ಸಮಾನತೆಯನ್ನು ಮುನ್ನಡೆಸುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಹೊಸದಿಲ್ಲಿಯಲ್ಲಿ ನಡೆಯಿತು ಮತ್ತು ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ ಕಾರ್ಯನಿರ್ವಾಹಕ ನಿರ್ದೇಶಕ ಬ್ರಜೇಶ್ ಪಾಂಡೆ ಸೇರಿದಂತೆ ಗಮನಾರ್ಹ ಹಾಜರಾತಿಗಳನ್ನು ಒಳಗೊಂಡಿತ್ತು; ಡಾ. ಅಖಿಲೇಶ್ ಗುಪ್ತಾ, ಐಐಟಿ ರೂರ್ಕಿಯಲ್ಲಿ ಸಲಹೆಗಾರ ಮತ್ತು ಗೌರವಾನ್ವಿತ ಸಂದರ್ಶಕ ಪ್ರಾಧ್ಯಾಪಕ; ಪ್ರೊಫೆಸರ್ ಅಜಯ್ ಸೂದ್, ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ; ಡಾ. ವಿ ಕೆ ಸಾರಸ್ವತ್, NITI ಆಯೋಗ್ ಸದಸ್ಯ; ಶ್ರೀಮತಿ ವೈಶಾಲಿ ನಿಗಮ್ ಸಿನ್ಹಾ, CII ಪ್ರಶಸ್ತಿಗಳ ಮೇಲೆ STEM ನಲ್ಲಿ ಮಹಿಳೆಯರ ಶ್ರೇಷ್ಠತೆ ಮತ್ತು ಸುಸ್ಥಿರತೆಯ ಅಧ್ಯಕ್ಷರು ಮತ್ತು ReNew ನ ಸಹ-ಸ್ಥಾಪಕರು; ಮತ್ತು CII ನ ಉಪ ಮಹಾನಿರ್ದೇಶಕರಾದ ಶ್ರೀಮತಿ ಅಮಿತಾ ಸರ್ಕಾರ್.
ಮಂಗಳೂರಿನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ (MCODS) ನ ಡೀನ್ ಡಾ. ಆಶಿತಾ ಉಪ್ಪೂರ್ ಮತ್ತು ಗುಣಮಟ್ಟ ನಿರ್ದೇಶಕ ಡಾ. ಕ್ರಿಸ್ಟೋಫರ್ ಸುಧಾಕರ್ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ MAHE ಪ್ರತಿನಿಧಿಸಿದರು ಮತ್ತು NITI ಆಯೋಗ್ ಸದಸ್ಯ ಡಾ. ವಿ ಕೆ ಸಾರಸ್ವತ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
STEM ನಲ್ಲಿ ಮಹಿಳೆಯರನ್ನು ಉತ್ತೇಜಿಸಲು MAHE ಯ ನಾಯಕತ್ವ ಮತ್ತು ಸಮರ್ಪಣೆಯು ಪ್ರತಿಭೆಯನ್ನು ಪೋಷಿಸುವ, ನಾವೀನ್ಯತೆಯನ್ನು ಪ್ರೋತ್ಸಾಹಿಸುವ ಮತ್ತು ಸಾಂಪ್ರದಾಯಿಕವಾಗಿ ಪುರುಷ-ಪ್ರಾಬಲ್ಯದ ಈ ವಿಭಾಗಗಳಲ್ಲಿ ಮಹಿಳಾ ವಿದ್ವಾಂಸರನ್ನು ಬೆಂಬಲಿಸುವ ವೇದಿಕೆಯನ್ನು ರಚಿಸುವಲ್ಲಿ ನಿರ್ಣಾಯಕವಾಗಿದೆ.
ಗೌರವಾನ್ವಿತ CII ಪಟ್ಟಿಯಲ್ಲಿ MAHE ಯ ಸೇರ್ಪಡೆಯು ಲಿಂಗ ವೈವಿಧ್ಯತೆಯನ್ನು ಉತ್ತೇಜಿಸಲು ಮತ್ತು STEM ಕ್ಷೇತ್ರಗಳಲ್ಲಿ ವೃತ್ತಿ ಮತ್ತು ಶಿಕ್ಷಣವನ್ನು ಮುಂದುವರಿಸುವಲ್ಲಿ ಮಹಿಳೆಯರಿಗೆ ಬೆಂಬಲ ನೀಡುವ ವಿಶ್ವವಿದ್ಯಾಲಯದ ಪ್ರಯತ್ನಗಳನ್ನು ಒತ್ತಿಹೇಳುತ್ತದೆ. ಸಂಸ್ಥೆಯು ಮಹಿಳಾ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳು, ವಿದ್ಯಾರ್ಥಿವೇತನಗಳು ಮತ್ತು ಮಾರ್ಗದರ್ಶನ ಉಪಕ್ರಮಗಳನ್ನು ಜಾರಿಗೆ ತಂದಿದೆ, ಮಹಿಳೆಯರಿಗೆ ಶೈಕ್ಷಣಿಕ ಮತ್ತು ಸಂಶೋಧನೆಯಲ್ಲಿ ಉತ್ತಮ ಸಾಧನೆ ಮಾಡಲು ಸಮಾನ ಅವಕಾಶಗಳನ್ನು ಖಾತ್ರಿಪಡಿಸುತ್ತದೆ. ಈ ಗುರುತಿಸುವಿಕೆ ಅಡೆತಡೆಗಳನ್ನು ಮುರಿಯಲು ಮತ್ತು ಮಹಿಳೆಯರಿಗೆ ಪೂರಕ ವಾತಾವರಣವನ್ನು ಬೆಳೆಸಲು MAHE ಯ ನಿರಂತರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ, ವಿದ್ಯಾರ್ಥಿಗಳು ಮಾತ್ರವಲ್ಲದೆ ವೈಜ್ಞಾನಿಕ ಪ್ರಗತಿಗಳು ಮತ್ತು ತಾಂತ್ರಿಕ ಆವಿಷ್ಕಾರಗಳಿಗೆ ಸಕ್ರಿಯ ಕೊಡುಗೆದಾರರಾಗಿಯೂ ಸಹ.
ಈ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಲಿಂಗ ವೈವಿಧ್ಯತೆಯನ್ನು ಉತ್ತೇಜಿಸುವಲ್ಲಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಹಿಳೆಯರ ಪಾತ್ರವನ್ನು ಮುನ್ನಡೆಸುವಲ್ಲಿ ತನ್ನ ನಾಯಕತ್ವವನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ, ಭಾರತದಲ್ಲಿ ಶಿಕ್ಷಣ ಮತ್ತು ಸಂಶೋಧನೆಯ ಭವಿಷ್ಯವನ್ನು ರೂಪಿಸುವಲ್ಲಿ ಗಮನಾರ್ಹ ದಾಪುಗಾಲುಗಳನ್ನು ಮಾಡುತ್ತಿದೆ.
ಮಂಗಳೂರು : ಶಕ್ತಿನಗರದ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಿಳೆಯರ ಬಸ್ ಬೇಡಿಕೆಯ ಕುರಿತು ಮಂಜುನಾಥ ಭಂಡಾರಿಯವರು ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಅದೀಗ ನೆರವೇರಿರುವುದು ಈ ಭಾಗದ ನಾಗರಿಕರ ಸಂತಸಕ್ಕೆ ಕಾರಣವಾಗಿದೆ.


ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ
ಕಾರ್ಕಳ : ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02ರಂದು ವಿಕಾಸ ಕಚೇರಿಯಲ್ಲಿ ನಡೆಯಿತು.

ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕು ಮತ್ತು ಸ್ವಾವಲಂಬಿಗಳಾಗಿ ದುಡಿಯಬೇಕು ಎನ್ನುವ ನಿಟ್ಟಿನಲ್ಲಿ ಸರಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದೆ. ಅರ್ಜಿ ಸಲ್ಲಿಸಿದ 35 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಗಿದೆ ಎಂದರು.
ಜೊತೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾರ್ಕಳ ತಾಲೂಕು ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.


ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಅನುಕರಣೆ – ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.
ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಜಾರಿಗೆ ತರಲಾಗುತ್ತಿದೆ. ಭಾರತದ ಬದಲಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಅನುಷ್ಠಾನ ಸಮಿತಿಗಳು ಜನರಿಗೆ ಮುಟ್ಟಿಸಲಿ, ರಾಜ್ಯದ ಯೋಜನೆಗಳು ಜನರಿಗೆ ತಲುಪುವಂತಾಗಲಿ ಎಂದರು.
ಈ ವೇಳೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಉಡಾ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ಎಂಎ ಗಫೂರ್, ದಿನೇಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಕೋಟ : ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ವಿನಯಚಂದ್ರ ಸಾಸ್ತಾನ ನೇತೃತ್ವದ ಉಡುಪಿಯ ಹೊಸಬದುಕು ಆಶ್ರಮಕ್ಕೆ ದಿನಸಿ ಪರಿಕರಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಮಂಗಳವಾರ ಪಂಚವರ್ಣದ ಕಛೇರಿಯಲ್ಲಿ ಜರಗಿತು.

ಮಣೂರು ಸ್ನೇಹಕೂಟದ ಮಾರ್ಗದರ್ಶಕರಾದ ವಿಷ್ಣುಮೂರ್ತಿ ಮಯ್ಯ ಆಶ್ರಯದ ಮುಖ್ಯಸ್ಥರಿಗೆ ದಿನಸಿ ಇತರ ಪರಿಕರಗಳನ್ನು ಹಸ್ತಾಂತರಿಸಿ ಸಂಘಸಂಸ್ಥೆಗಳು ಇಂತಹ ಕಾರ್ಯಕ್ರಮದಲ್ಲಿ ಕೈಜೋಡಿಸಿ ಅಶಕ್ತರ ಅಥವಾ ಅನಾಥಾಶ್ರಮಗಳ ನೆರವಿಗೆ ಶ್ರಮಿಸಬೇಕು ಎಂದರು.
ಹೊಸಬದುಕು ಆಶ್ರಯದ ಟ್ರಸ್ಟಿ ರಾಜೇಶ್ಚರಿ ವಿನಯಚಂದ್ರ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಕ ಸದಸ್ಯ ನರಸಿಂಹ ಗಾಣಿಗ, ಸಂಚಾಲಕ ಅಮೃತ್ ಜೋಗಿ, ಕಾರ್ಯದರ್ಶಿ ವಸಂತಿ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.
ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಮಹಿಳಾ ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಉಡುಪಿಯ ವಿಶೇಷ ಅಗತ್ಯವುಳ್ಳ ಮಕ್ಕಳ ತರಭೇತಿ ಕೇಂದ್ರದ ಮಕ್ಕಳೊಂದಿಗೆ ಆಚರಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಹೆಲೆನ್ ಸೋನ್ಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾದ ಶ್ರೀಮತಿ ಎಲ್ಲಮ್ಮ ಬಿಇಒ ಮಾತನಾಡಿ ಮಕ್ಕಳಿಗಾಗಿ ನನ್ನಿಂದ ಸರ್ಕಾರದ ವ್ಯಾಪ್ತಿಯಲ್ಲಿ ಯಾವುದೇ ಸಹಾಯ ಮಾಡುವುದಾಗಿ ಹೇಳಿದರು. ಶ್ರೀಯುತ ಫಯಾಜ್ ಇವರು ಜಾಗವನ್ನು ಕೊಟ್ಟಿರುವುದಲ್ಲದೆ ವ್ಯವಸ್ಥಿತವಾದ ಕಟ್ಟಡವನ್ನು ಕೊಟ್ಟು ಸದಾ ನೆರವನ್ನು ನೀಡುತ್ತಾ ಬಂದಿರುತ್ತಾರೆ. ಹೆಡ್ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಯುತ ನಾಗರಾಜ್ ಅವರು ಮಕ್ಕಳಿಗಾಗಿ ತಮ್ಮ ಆದಾಯದಲ್ಲಿ ನೆರವನ್ನು ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಡಾಕ್ಟರ್ ದೀಕ್ಷಿತಾ, ಶ್ರೀಮತಿ ಗೀತಾ ಹೆಗಡೆ, ಶ್ರೀಮತಿ ಶಾಲಿನಿ, ಫಯಾಜ್ ಸರ್, ನಾಗರಾಜ್ ಸರ್ ಹಾಗು ಶ್ರೀಮತಿ ಎಲ್ಲಮ್ಮ ಇವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಘಟಕದ ಅಧ್ಯಕ್ಷೆ ಹೆಲೆನ್ ಸೋನ್ಸ್ ರಾಜ್ಯಾಧ್ಯಕ್ಷರಾದ ಟಿ, ಎ ನಾರಾಯಣ ಗೌಡರ ಕಾರ್ಯ ವೈಖರಿಯ ಬಗ್ಗೆ ಮಾತನಾಡಿ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿಯಲ್ಲಿ ಬಲವಾದ ಸಂಘಟನೆಯ ಅಗತ್ಯವಿದೆ ಎಲ್ಲರೂ ಕೈ ಜೋಡಿಸಿ ಸಂಘಟನೆ ಬಲ ಗೊಳಿಸಬೇಕಾಗಿದೆ ಎಂದು ಹೇಳಿದರು.
ಮಕ್ಕಳಿಗಾಗಿ ಗಾಯನ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ನರ್ತ್ಯ ಸ್ಪರ್ಧೆ, ಏರ್ಪಡಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ರೆಡ್ ಕ್ರಾಸ್ ಸಂಸ್ಥೆಯಿಂದ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ಪಾನೀಯ ಸಿಹಿ ತಿಂಡಿ, ಊಟದ ಡಬ್ಬಿ, ಚಿತ್ರಕಲಾ ಪುಸ್ತಕ, ಬಣ್ಣದ ಪೆನ್ಸಿಲ್ಗಳನ್ನು ವಿತರಿಸಲಾಯಿತು. ಎಲ್ಲರಿಗೂ ಫಲಹಾರ ನೀಡಲಾಯಿತು.
ಕರವೇ ಪದಾಧಿಕಾರಿಗಳಾದ ಸುನೀತಾ, ಪವಿತ್ರಾ ಅನುರಾಧ, ವಿಶಾಲಿ ಮತ್ತಿತರರು ಸದಸ್ಯರು ಉಪಸ್ಥಿತರಿದ್ದರು.
ಕರವೇ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಮುಕ್ತಾ ಸಾವಂತ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಪವಿತ್ರಾ ಶೆಟ್ಟಿ ವಂದಿಸಿದರು.
ಉಡುಪಿ : ಒನಕೆ ಓಬವ್ವ ಓರ್ವ ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ. ಹೈದರಾಲಿಯ ಸೈನಿಕರು ಕೋಟೆಯನ್ನು ಮುತ್ತಿಗೆ ಹಾಕಿದ ಸಂದರ್ಭದಲ್ಲಿ, ಒಬ್ಬ ಸಾಮಾನ್ಯ ಹೆಣ್ಣುಮಗಳು, ಅಸಾಮಾನ್ಯವಾಗಿ ಯುದ್ಧಕಲೆಯ ಆಳ, ಅಗಲದ ಅರಿವಿಲ್ಲದೆ, ಊಟ ಮಾಡುತ್ತಿರುವ ಗಂಡನನ್ನು ಎಬ್ಬಿಸದೇ, ಶತ್ರು ಸೈನ್ಯವನ್ನು ಕೇವಲ ಒನಕೆಯಿಂದ ಸದೆ ಬಡಿದ ಆಕೆಯ ಸಾಹಸ, ಇಂದು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಸರಕಾರ ಒನಕೆ ಓಬವ್ವ ಜಯಂತಿಯನ್ನು ಆಚರಿಸುತ್ತಿರುವುದು ಇಡೀ ನಾರಿಕುಲಕ್ಕೆ ಸಂದ ಗೌರವ ಎಂದವರು ನುಡಿದರು.
ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಮಹತ್ತರವಾದುದು : ಡಾ. ಎಂ.ಎನ್. ರಾಜೇಂದ್ರ ಕುಮಾರ್
ಉಡುಪಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸಾಯಿಬ್ರಕಟ್ಟೆ ಶಾಖೆಯು ಬ್ರಹ್ಮಾವರ-ಹಾಲಾಡಿ ಮುಖ್ಯರಸ್ತೆಯಲ್ಲಿರುವ ಸಾಯಿಬ್ರಕಟ್ಟೆ ಎಸ್.ಎಸ್. ಕಾಂಪ್ಲೆಕ್ಸ್ ನೆಲ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಸಂಪೂರ್ಣ ಹವಾನಿಯಂತ್ರಿತ ಸ್ಥಳಾಂತರ ಶಾಖೆ ಹಾಗೂ ಎಟಿಎಂ ಉದ್ಘಾಟನೆಗೊಂಡಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸ್ಥಳಾಂತರ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು, ದೇಶದ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರ ಪ್ರಬಲವಾದ ಪಾತ್ರವನ್ನು ನಿರ್ವಹಿಸಿದ್ದು, ಜನರ ಕಷ್ಟ, ಸುಖಗಳಿಗೆ ಸ್ಪಂದಿಸುತ್ತಿದೆ. ರೈತರು, ಮಹಿಳೆಯರು ಸೇರಿದಂತೆ ಗ್ರಾಮೀಣ ಭಾಗದ ಜನರ ಸ್ವಾವಲಂಬಿ ಬದುಕಿಗೆ ಆಸರೆಯಾಗಿದೆ ಎಂದರು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಡಾ.ಎಂ.ಎನ್. ರಾಜೇಂದ್ರ ಕುಮಾರ್ರ ಮಾರ್ಗದರ್ಶನದ ದಕ್ಷ ಆಡಳಿತ ಮಂಡಳಿ, ಪ್ರಾಮಾಣಿಕ ಮತ್ತು ನಗುಮೊಗದ ಸಿಬ್ಬಂದಿ, ಪೂರಕ ವಾತಾವರಣದೊಂದಿಗೆ ಬ್ಯಾಂಕ್ ಉತ್ತುಂಗದ ಶಿಖರಕ್ಕೇರಿದ್ದು, ರೈತರಿಗೆ ಪೂರಕವಾಗಿ ಸ್ಪಂದಿಸುತ್ತಿದೆ ಎಂದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಶಿರಿಯಾದ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ. ಪ್ರದೀಪ್ ಬಲ್ಲಾಳ್, ಶಿರಿಯಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ, ಶಾಖಾ ಕಟ್ಟಡ ಮಾಲೀಕರಾದ ಸುರೇಶ್ ಶೆಟ್ಟಿ ಬಿ., ಶರತ್ ಕುಮಾರ್ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕ ಕೆ.ಆರ್. ಲಾವಣ್ಯ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಕಾರಿ (ಪ್ರಭಾರ) ಗೋಪಾಲಕೃಷ್ಣ ಭಟ್ ಕೆ., ನಿರ್ದೇಶಕರಾದ ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಕೆ. ಹರಿಶ್ಚಂದ್ರ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಉಪಸ್ಥಿತರಿದ್ದರು. ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು.