ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ

ಉಡುಪಿ : ಉಡುಪಿಯ ಶ್ರೀಕೃಷ್ಣಮಠದಲ್ಲಿಂದು ಪ್ರಥಮನ ಏಕಾದಶಿ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಗಳು ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು.

ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಮಹಾಪೂಜೆ ಪೂರೈಸಿದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀಗಳು ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು. ಮುದ್ರಾಧಾರಣೆಗಾಗಿ ಬಂದವರ ಸರತಿ ಸಾಲು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಶ್ರೀಕೃಷ್ಣಮಠದ ಮುಂಭಾಗದಲ್ಲಿತ್ತು.

ಮುದ್ರಾಧಾರಣೆ ಮಾಡುವ ಮುನ್ನ ವೈದಿಕರು ಸುದರ್ಶನ ಹೋಮ ನಡೆಸಿದರು. ಅದರಲ್ಲಿ ಬಿಸಿ ಮಾಡಿದ ಶಂಖ ಚಕ್ರಗಳ ಚಿಹ್ನೆಗಳನ್ನು ಪರ್ಯಾಯ ಶ್ರೀಗಳು ಭಕ್ತರ ತೋಳಿನಲ್ಲಿ ಮುದ್ರಿಸಿದರು. ಉಡುಪಿ ಮಾತ್ರವಲ್ಲದೆ ನಾಡಿನ ಬಹುತೇಕ ಮಠಗಳಲ್ಲಿ ವಿವಿಧ ಮಠಾಧೀಶರುಗಳು ಈ ದಿನ ಭಕ್ತರಿಗೆ ತಪ್ತಮುದ್ರಾಧಾರಣೆ ಮಾಡುವ ಸಂಪ್ರದಾಯವಿದೆ.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ