29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : 29 ವರ್ಷಗಳ ಹಿಂದಿನ‌ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ.

ಈತ 1995ರಲ್ಲಿ ವ್ಯಕ್ತಿಯೋರ್ವನಿಗೆ ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ ಯವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ