ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ ಬಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಗದ್ದೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ನಡೆದಿದೆ.

ಸರಪಾಡಿ- ಬಿ.ಸಿ.ರೋಡು ನಡುವೆ ಸಂಚರಿಸುವ ಖಾಸಗಿ ಬಸ್ಸು ಕೊಟ್ಟುಂಜಕ್ಕೆ ಬರುತ್ತಿದ್ದಂತೆ ವಿಪರೀತ ಮಳೆ ಸುರಿಯುತ್ತಿತ್ತು. ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ ನಿಯಂತ್ರಣ ತಪ್ಪಿದ ಬಸ್ ನೇಜಿ ನಾಟಿ ಮಾಡಿದ್ದ ಗದ್ದೆಗೆ ಬಿದ್ದಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆದರೆ ಬಸ್ ಬಿದ್ದು ಭತ್ತದ ಕೃಷಿಗೂ ಹಾನಿಯಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ