ಪೆಟ್ರೋಲ್ ಬಂಕ್‌ನಲ್ಲಿಯೇ ಧಗಧಗನೇ ಹೊತ್ತಿ ಉರಿದ ಕಾರು – ಸ್ಥಳದಲ್ಲಿ ಆತಂಕ

ಮಂಗಳೂರು : ನಗರದ ಲೇಡಿಹಿಲ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಮಾರುತಿ 800ಕಾರೊಂದು ಧಗಧಗನೇ ಹೊತ್ತಿ ಉರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ಬಜ್ಪೆ ಕಡೆಯಿಂದ ಆಗಮಿಸಿದ ಈ ಕಾರು ಪಾರ್ಶ್ವನಾಥ ಎಂಬವರಿಗೆ ಸೇರಿದೆ ಎನ್ನಲಾಗಿದೆ. ಲೇಡಿಹಿಲ್‌ ಬಳಿ ಆಗಮಿಸುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಷ್ಟರಲ್ಲಾಗಲೇ ಕಾರು ಚಾಲಕ ಹೊರಕ್ಕೆ ಜಿಗಿದಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನ ಸಂಪೂರ್ಣ ಆವರಿಸಿದೆ. ತಕ್ಷಣ ಪೆಟ್ರೋಲ್ ಬಂಕ್ ಸಿಬ್ಬಂದಿ ನೀರು ಸುರಿದು ಬೆಂಕಿ ನಂದಿಸುವ ಯತ್ನ ಮಾಡಿದ್ದಾರೆ.

ಪೆಟ್ರೋಲ್ ಬಂಕ್ ಬಳಿಯೇ ಘಟನೆ ನಡೆದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಂಕ್ ಅಡಿಯಲ್ಲಿ ಪೆಟ್ರೋಲ್ ಟ್ಯಾಂಕ್ ಇದ್ದಿದ್ದರಿಂದ ಟ್ಯಾಂಕ್‌ಗೆ ಬೆಂಕಿ ಹತ್ತಿಕೊಳ್ಳುವ ಆತಂಕವೂ ಇತ್ತು. ಆದರೆ ಅಷ್ಟರಲ್ಲಾಗಲೇ ಬೆಂಕಿಗೆ ನೀರು ಹಾಕಿದ್ದರಿಂದ, ಅಗ್ನಿಶಾಮಕದಳವೂ ಆಗಮಿಸಿದ್ದರಿಂದ ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದಂತಾಗಿದೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್