ಸರಕಾರಗಳ ದುರಾಡಳಿತದಿಂದ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ : ಡಾ‌. ಪಿ.ವಿ. ಭಂಡಾರಿ

ಉಡುಪಿ : ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ ಸರಕಾರಗಳ ದುರಾಡಳಿತದಿಂದ ಇನ್ನೂ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ, ಕೇಂದ್ರ ಸರಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಸಿಐಟಿಯು, ಎಐಎಡಬ್ಲ್ಯುಯು ಹಾಗೂ ಎಐಕೆಎಸ್ ಉಡುಪಿ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣ ಬಳಿ ಹಮ್ಮಿಕೊಳ್ಳಲಾದ ಅಹೋರಾತ್ರಿ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಗಳು ಉಡುಪಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದೆ. ಈ ಜಿಲ್ಲೆಗೆ ಪೂರ್ಣಪ್ರಮಾಣದ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವಲ್ಲಿ ಎರಡೂ ರಾಜಕೀಯ ಪಕ್ಷಗಳು ಕೂಡ ಸಂಪೂರ್ಣ ವಿಫಲವಾಗಿದೆ. ಉಡುಪಿ ಜಿಲ್ಲೆಯ ಬಡವರು ಏನು ತಪ್ಪು ಮಾಡಿದ್ದಾರೆ. ಅವರಿಗೆ ಆರೋಗ್ಯ ತೊಂದರೆ ಬಂದಾಗ ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದರು.
ಧರಣಿಯಲ್ಲಿ ಸಿಐಟಿಯು ಮುಖಂಡರಾದ ಕೆ.ಶಂಕರ್, ಬಾಲಕೃಷ್ಣ ಶೆಟ್ಟಿ, ಕವಿರಾಜ್, ಎಚ್.ನರಸಿಂಹ, ಬಲ್ಕೀಸ್, ಸುರೇಶ್ ಕಲ್ಲಾಗರ್, ಶಶಿಧರ್ ಗೊಲ್ಲ, ದಸಂಸ ಮುಖಂಡರಾದ ಸುಂದರ್ ಮಾಸ್ತರ್, ಜಯನ್ ಮಲ್ಪೆ, ಶಂಕರ್‌ದಾಸ್ ಚೇಂಡ್ಕಲ, ಆಟೋ ರಿಕ್ಷಾ ಮತ್ತು ವಾಹನ ಚಾಲಕ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ ಮೊದಲಾದವರು ಹಾಜರಿದ್ದರು.
ಬುಧವಾರ ಸಂಜೆ 6.30ರಿಂದ ಮಧ್ಯರಾತ್ರಿ 12ಗಂಟೆಯವರೆಗೆ ಧರಣಿ ನಡೆದಿದ್ದು, ನಂತರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಲಾಯಿತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ