ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ನದಿಯಲ್ಲಿ ಪತ್ತೆ

ಉಡುಪಿ : ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾದ ಘಟನೆ ಸಂಭವಿಸಿದೆ.

ಮೃತ ವ್ಯಕ್ತಿ ಸುಮನೇಶ್ ಹೆಗ್ಡೆ (42) ಮಧ್ವನಗರ ಮೂಡಬೆಟ್ಟು ನಿವಾಸಿಯಾಗಿದ್ದಾರೆ. ವಿವಾಹಿತರಾಗಿದ್ದು, ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಿಂದ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರೆಂದು ತಿಳಿದುಬಂದಿದೆ. ಇವರು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇವರು ಮೃತದೇಹವು ನದಿಯಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿದ ಮಾಜಿ ನಗರಸಭೆ ಸದಸ್ಯ ಚಿನ್ಮಯಮೂರ್ತಿ ಮತ್ತು ಅವರ ತಂಡವು ಶವವನ್ನು ದಡಕ್ಕೆ ಸೇರಿಸಿತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ