ಲಾರಿ ಚಲಾಯಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವು

ಸಿದ್ದಾಪುರ : ಕಲ್ಲಿದ್ದಲು ತುಂಬಿಸಿಕೊಂಡು, ಬಳ್ಳಾರಿ ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕನೊಬ್ಬ ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಚಾಲನೆಯಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.

ಲಾರಿ ಚಾಲಕ ವಿಶಾಂತ್‌(29) ಮೃತಪಟ್ಟ ದುದೈವಿಯಾಗಿದ್ದಾರೆ. ಲಾರಿಯು ಮಂಗಳೂರಿನ ಇರ್ಪಾನ್‌ ಎಂಬುವವರ ಮಾಲಿಕತ್ವದ ಲಾರಿಯನ್ನು ವಿಶಾಂತ್‌ ಅವರು ಚಲಾಯಿಸುತ್ತಿದ್ದು, ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೆ 108 ವಾಹನದ ಮೂಲಕ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಸಹೋದರ ನವಿನ್‌ (27) ಅವರು ಪೊಲೀಸರಿಗೆ ದೂರು ನೀಡಿದರು. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!