ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಕಾರು : ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ

ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಉದ್ಯಾವರದ ಖಾಸಗಿ ಶೋರೂಂ‌ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಗಾಯಾಳುಗಳ ಸಹಾಯಕ್ಕೆ ಧಾವಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡುವ ಅವರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ