ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ – ತಪ್ಪಿದ ಭಾರಿ ದುರಂತ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು – ಪೆರಂಪಳ್ಳಿ ಕ್ರಾಸ್‌ನಲ್ಲಿ ಸಂಭವಿಸಿದೆ.
ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿದ್ದು, ಪೆರಂಪಳ್ಳಿಗೆ ತೆರಳುವ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ