ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ.

ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಮುಳ್ಳಿಕಟ್ಟೆ ಜಂಕ್ಷನ್ ಸದಾ ಸಮಸ್ಯೆಗಳ ತಾಣವಾಗಿದ್ದು, ಹಲವು ಅಪಘಾತಗಳು ಇಲ್ಲಿ ಸಂಭವಿಸಿವೆ. ಆದುದರಿಂದ ಈ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ