ಸಮುದ್ರ ಪಾಲಾದ ಯುವಕ; ಮುಂದುವರಿದ ಶೋಧಕಾರ್ಯ

ಕುಂದಾಪುರ : ತಾಲೂಕಿನ ಬೀಜಾಡಿಯಲ್ಲಿ ಕಡಲ ಅಲೆಗಳ ರಭಸಕ್ಕೆ ಸಿಕ್ಕು ತುಮಕೂರು ತಿಪಟೂರು ಮೂಲದ ಟಿ.ಆ‌ರ್ ಯೋಗೀಶ್ (23) ಎನ್ನುವ ಯುವಕ ಕೊಚ್ಚಿಹೋದ ಘಟನೆ ಬುಧವಾರ ಸಂಜೆ ವೇಳೆ ನಡೆದಿದ್ದು ಆತನ ಸುಳಿವು ಗುರುವಾರ ಸಂಜೆವರೆಗೂ ಪತ್ತೆಯಾಗಿಲ್ಲ.

ಕುಂದಾಪುರದ ಗೋಪಾಡಿ-ಬೀಜಾಡಿಯ ಸ್ನೇಹಿತನ ಮನೆಯ ವಿವಾಹ ಕಾರ್ಯಕ್ರಮಕ್ಕೆ ಬಂದಿದ್ದ ಯುವಕರಿಬ್ಬರು ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿತ್ತು. ಈತನೊಂದಿಗಿದ್ದ ಇನ್ನೋರ್ವ ಸಂದೀಪ್ ಎನ್ನುವ ಯುವಕ‌ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗುರುವಾರ ಬೆಳಿಗ್ಗಿನಿಂದಲೂ ಮೀನುಗಾರರು, ಪೊಲೀಸರು, ಕರಾವಳಿ ಕಾವಲು ಪಡೆಯವರು, ಸ್ಥಳೀಯರು ಸತತ ಹುಡುಕಾಟ ನಡಸಿದರೂ ಕೂಡ ಕಡಲು ಪ್ರಕ್ಷುಬ್ಧಗೊಂಡಿದ್ದು ಅಲೆಗಳು ಹೆಚ್ಚಿದ್ದ ಕಾರಣ ಯುವಕನ ಸುಳಿವು ಪತ್ತೆಯಾಗಿಲ್ಲ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ