ಬಸ್ಸಿನಲ್ಲಿ ಚಿನ್ನದ ಸರ ಎಗರಿಸಿದ ಬಂಟ್ವಾಳದ ಮೂವರು ಕಳ್ಳಿಯರು ಅರೆಸ್ಟ್

ಬಸ್ ಹತ್ತುವಾಗ ಮಹಿಳೆಯ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮನ್ನರಸಲ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದ ಮಹಿಳೆಯೊಬ್ಬರ ಚಿನ್ನ ಸರ ಕದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಚೋಟಮ್ಮ(52), ಲಕ್ಷ್ಮಿ(37) ಮತ್ತು ಕೆಂಡಮ್ಮ(47) ಎಂದು ಗುರುತಿಸಲಾಗಿದೆ.

ಮನ್ನಾರಸಾಲ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಕೊಲ್ಲಂ ಮೂಲದ ರಾಜಮ್ಮ ಎಂಬುವರ ಒಂದು ಮುಕ್ಕಾಲು ಪವನ್ ಚಿನ್ನದ ಸರವನ್ನು ಕದ್ದೊಯ್ದ ಘಟನೆ ಹರಿಪಾಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿತ್ತು.

ಬಸ್ ಹತ್ತುವಾಗ ಮೂವರು ಮಹಿಳೆಯರು ಕೈಚಳಕ ತೋರಿಸಿದ್ದಾರೆ. ಇದನ್ನು ಗಮನಿಸಿದ ರಾಜಮ್ಮ ಗಲಾಟೆ ಮಾಡಿದ್ದು, ಇತರೆ ಪ್ರಯಾಣಿಕರು ಯುವತಿಯರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತಪಾಸಣೆ ವೇಳೆ ಬ್ಯಾಗ್‌ನೊಳಗೆ ಕಳ್ಳತನವಾದ ಸರ ಪತ್ತೆಯಾಗಿದೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours