ಅಣಬೆ ತಿಂದು ಮೂವರು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಉಡುಪಿ : ರಸ್ತೆ ಬದಿಯ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಸಂಭವಿಸಿದ್ದು ಅವರನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ.

ಗದಗ ಮೂಲದ ಅಣ್ಣಪ್ಪ(45), ಸುಜಾತ(25) ಹಾಗೂ ಸುಜಾತ ಅವರ ಮಗಳು ಸಂಗೀತ(7) ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರು.

ಕೂಲಿ ಕೆಲಸ ಮಾಡಿಕೊಂಡಿರುವ ಇವರು, ರಾತ್ರಿ ವೇಳೆ ರಸ್ತೆ ಬದಿಯಲ್ಲಿದ್ದ ಅಣಬೆಯನ್ನು ತಿಂದಿದ್ದರು. ಇದರಿಂದ ಇವರು ತಡರಾತ್ರಿ ವೇಳೆ ತೀವ್ರ ಅಸ್ವಸ್ಥಗೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಪತ್ಥಾಂಧವ ಈಶ್ವ‌ರ್ ಮಲ್ಪೆ ಮತ್ತು ತಂಡ ಆಂಬುಲೆನ್ಸ್‌ ಮೂಲಕ ಈ ಮೂವರನ್ನೂ ಉಡುಪಿಯ ಆಸ್ಪತ್ರೆಗೆ ದಾಖಲಿಸಿದೆ. ವೈದ್ಯರು ನೀಡಿದ ಚಿಕಿತ್ಸೆಯಿಂದ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ