ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ನಾಳೆಯೂ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 28ರಂದು ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ‌. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಸೇರಿದಂತೆ ನಾಳೆ ಪಿಯುಸಿಗೂ ರಜೆ ಘೋಷಿಸಿದ್ದಾರೆ.

ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಗುರುವಾರ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ, ಜನರು ನೀರು ಇರುವ ತಗ್ಗು ಪ್ರದೇಶ, ನದಿ ತೀರ, ಕೆರೆಗಳ ಬಳಿ ತೆರಳದಂತೆ ಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಹಿರಿಯ ಸಾಧಕ ಪ್ರೊ.ಹೆರಂಜೆ ಕೃಷ್ಣ ಭಟ್ ವಿಧಿವಶ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್