ಬಲೆಗೆ ಸಿಕ್ಕಿದ ತಿಮಿಂಗಿಲವನ್ನು ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರ ತಂಡಕ್ಕೆ ಗೌರವ

ಮಲ್ಪೆ : ಇತ್ತೀಚೆಗೆ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ಬಲೆಗೆ ಅಕಸ್ಮಿಕವಾಗಿ ಸಿಲುಕಿದ ಅಳಿವಿನಂಚಿನಲ್ಲಿರುವ ತಿಮಿಂಗಿಲವನ್ನು ಮರಳಿ ನೀರಿಗೆ ಬಿಟ್ಟ ಮೀನುಗಾರ ತಂಡ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಈ ತಂಡಕ್ಕೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲ್ಪೆ ಬಂದರಿನ ಮೀನುಗಾರರ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.

ಕೇಂದ್ರೀಯ ಸಮುದ್ರ ಮೀನುಗಾರಿಕೆ ಸಂಶೋಧನಾ ಕೇಂದ್ರ(ಸಿಎಂಎಫ್‌ಆರ್‌ಐ) ಮಂಗಳೂರು ಪ್ರಾದೇಶಿಕ ಕಚೇರಿ, ಮೀನುಗಾರಿಕೆ ಇಲಾಖೆ, ಮಂಗಳೂರು ಮೀನುಗಾರಿಕಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಎಫ್‌ಐಪಿ-‌ಸ್ಮಾಲ್ ಪೆಲ್ಯಾಜಿಕ್ ಪರ್ಸಿನ್ ಫಿಶರೀಸ್ ಇವುಗಳ ಸಹಯೋಗ‌ದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಶ್ರೀದುರ್ಗಾಂಬಿಕ ಬೋಟಿನ ಕ್ಯಾಪ್ಟನ್‌ ಸದಾಶಿವ ಎಂ.ಮೆಂಡನ್ ಹಾಗೂ ಅವರ ತಂಡವನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಉಡುಪಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಅಂಜನಾ ದೇವಿ, ಮಲ್ಪೆ ಪರ್ಸಿನ್ ಮೀನುಗಾರಿಕಾ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ಆಳಸಮುದ್ರ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್ ಸುವರ್ಣ, ಮಂಗಳೂರು ಮೀನುಗಾರಿಕಾ ಕಾಲೇಜಿನ ವಿಭಾಗ ಮುಖ್ಯಸ್ಥೆ ಡಾ.ಮೃದುಲ ರಾಜೇಶ್ ಉಪಸ್ಥಿತರಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್