ಕೋಡಿ ಬೀಚ್‌ನಲ್ಲಿ ನೀರಿಗಿಳಿದ ಮೂವರಲ್ಲಿ ಇಬ್ಬರು ನೀರುಪಾಲು, ಓರ್ವನ ರಕ್ಷಣೆ..!

ಉಡುಪಿ : ಬೀಚ್‌ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್‌‌ನಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆಯವರೊಂದಿಗೆ ಕೋಡಿ ಬೀಚ್‌ಗೆ ತೆರಳಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಸಂಜೆ ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮಕ್ಕಳೊಂದಿಗೆ ಕೋಡಿ ಬೀಚ್‌ಗೆ ಬಂದಿದ್ದರು.

ಈ ಸಂದರ್ಭ ದಂಪತಿ ಪುತ್ರರಾದ ಧನರಾಜ್‌ (23) ದರ್ಶನ್‌ (18) ಹಾಗೂ ಧನುಷ್‌ ನೀರಿಗಿಳಿದಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಕ್ಕಿ ದರ್ಶನ್, ಧನರಾಜ್‌ ನೀರುಪಾಲಾಗಿದ್ದಾರೆ.

ಧನುಷ್‌‌ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ