ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ. ಗರಿ

ಉಡುಪಿ : ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ‌ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್‌ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.
ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.

ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.

ಉಡುಪಿಯ ಸಾಧನೆಯ ಹಾದಿ

ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ.‌ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ, ವಾರ್ಡ್‌ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ‌ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್