ಉದ್ಯಾವರ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ

ಉಡುಪಿ : ಉದ್ಯಾವರ ಪದವಿ ಪೂರ್ವ ಕಾಲೇಜು ಇದರ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಸಾಲ್ಯಾನ್, ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಅಧ್ಯಕ್ಷರಾದ ಸಂತೋಷ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಉದ್ಯಾವರ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಯು. ಅಜಿತ್ ಕುಮಾರ್ ಶಣೈ, ಉದ್ಯಾವರ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಾದ ಶಿವರಾಜ್, ಪ್ರಾಂಶುಪಾಲರಾದ ಕೃಷ್ಣ ಮೂರ್ತಿ, ಹೈಸ್ಕೂಲ್ ವಿಭಾಗದ ಮುಖ್ಯಸ್ಥರಾದ ಆಶಲತಾ ಕುಮಾರಿ, ಪ್ರಾಥಮಿಕ ಶಾಲಾ ಮುಖ್ಯಸ್ಥರಾದ ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ