ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ – ನಿವೃತ್ತ ನ್ಯಾ| ಸಂತೋಷ್ ಹೆಗ್ಡೆ ಕಳವಳ

ಉಡುಪಿ : ದೇಶದ ಸಂಪತ್ತನ್ನು ಕೆಲವು ರಾಜಕಾರಣಿಗಳು ಅಧಿಕಾರಿಗಳು ಲೂಟುತ್ತಿದ್ದು ಒಂದೊಂದು ಹಗರಣದಲ್ಲಿನ ಸಂಪತ್ತಿನ ಮೌಲ್ಯವೇ ದೇಶದ ಒಟ್ಟು ಬಜೆಟಿನ ಗಾತ್ರಕ್ಕಿಂತ ಹೆಚ್ಚಿದೆ. ಇವತ್ತು ಬಹಳ ಸುಲಭವಾಗಿ ಹಣ ಮಾಡಬಹುದು ಎಂಬ ಕಾರಣಕ್ಕೆ ಯುವ ಸಮುದಾಯವೂ ರಾಜಕಾರಣಿಗಳಾಗಬೇಕೆಂದು ಅಪೇಕ್ಷೆ ಪಡುವಂಥ ದಯನೀಯ ಸ್ಥಿತಿ ಎದುರಾಗಿದೆ. ಇಂಥ ಗಂಭೀರ ಪರಿಸ್ಥಿತಿಗಳು ದೇಶದ ಭವಿಷ್ಯವನ್ನು ಮಂಕಾಗಿಸುತ್ತಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.‌

ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಶ್ರೀ ಸುಶ್ರೀಂದ್ರ ತೀರ್ಥರು ಮತ್ತು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗಂಭೀರ ಸಮಾಲೋಚನೆ ನಡೆಸಿದರು.

ಕೆಲವು ರಾಜ್ಯಗಳಲ್ಲಿನ ಒಂದೊಂದು ಹಗರಣದ ಮೊತ್ತ ಕೋಟ್ಯಂತರ ರೂ.ಗಳಾಗಿದೆ.‌ ಯಾವ ಸಂವಿಧಾನ ಯಾವ ಕಾನೂನುಗಳಿಂದಲೂ ಇದರ ನಿಯಂತ್ರಣ ಅಸಾಧ್ಯ ಎಂಬಂತಾಗಿದೆ. ರಾಜಕಾರಣಿಗಳು ಕಾಯಿದೆ ಕಾನೂನು ಸಂವಿಧಾನಗಳೂ ತಮಗೆ ಸಂಬಂಧವೇ ಇಲ್ಲ ಎಂಬಂತೆ ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ಈ ಬೆಳವಣಿಗೆಗಳನ್ನು ನೋಡುವಾಗ ಬಹಳ ಬೇಸರವಾಗ್ತದೆ. ಆದ್ದರಿಂದ ಹೊಸ ಪೀಳಿಗೆಗೆ ದುರಾಸೆಯಿಂದ ದೂರವಿರಲು, ದೇಶಾಭಿಮಾನ ಹಾಗೂ ಮಾನವೀಯತೆಯ ಪಾಠ ಹೇಳಬೇಕಾಗಿದೆ ಎಂದರು. ಯತಿತ್ರಯರು ಹೆಗ್ಡೆಯವರ ವಿಚಾರಗಳಿಗೆ ಸಹಮತ ವ್ಯಕ್ತಪಡಿಸಿ ಅವರಿಗೆ ಫಲ ಮಂತ್ರಾಕ್ಷತೆ ನೀಡಿ ಹರಸಿದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ