ಪರವಾನಿಗೆ ಇಲ್ಲದ ಪಿಸ್ತೂಲ್ ಮಿಸ್‌ಫೈರ್ ಯುವಕನಿಗೆ ಗುಂಡೇಟು – ಪ್ರಕರಣ ದಾಖಲು

ಮಂಗಳೂರು : ಪರವಾನಿಗೆ ಇಲ್ಲದ ಪಿಸ್ತೂಲ್ ಮಿಸ್‌ಫೈರ್ ಆಗಿ ಯುವಕನಿಗೆ ಗುಂಡೇಟು ತಗುಲಿದ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.6ರಂದು ವಾಮಂಜೂರು ಬಳಿಯ ಸೆಕೆಂಡ್ ಹ್ಯಾಂಡ್ ಸೇಲ್ಸ್ ಬಝಾರ್‌‌ ಮಾಲಕ ಅದ್ದು ಅಲಿಯಾಸ್ ಬದ್ರುದ್ದೀನ್ (34) ಎಂಬಾತ ಪರವಾನಿಗೆ ಇಲ್ಲದ ಪಿಸ್ತೂಲ್ ಹೊಂದಿದ್ದ. ಈತ ತನ್ನ ಅಂಗಡಿಯಲ್ಲಿ ಕುಳಿತುಕೊಂಡು ಪಿಸ್ತೂಲ್ ಅನ್ನು ಪರೀಕ್ಷಿಸುತ್ತಿದ್ದ. ಈ ವೇಳೆ ಟ್ರಿಗ್ಗರ್ ಒತ್ತಿದ್ದಾನೆ. ಪರಿಣಾಮ ಫೈರ್ ಆಗ ಅಂಗಡಿಯಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ (25) ಎಂಬಾತನಿಗೆ ಗುಂಡು ತಗುಲಿದೆ. ತಕ್ಷಣ ಗಾಯಾಳು ಸಫ್ವಾನ್‌ನನ್ನು ಜನಪ್ರಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಪರವಾನಿಗೆ ಇಲ್ಲದ ಪಿಸ್ತೂಲ್ ಅನ್ನು ಮೂಡುಶೆಡ್ಡೆ ನಿವಾಸಿ ಇಮ್ರಾನ್ ಎಂಬಾತ ಅದ್ದು ಅಲಿಯಾಸ್ ಬದ್ರುದ್ದೀನ್‌ನಿಗೆ ನೀಡಿದ್ದನು. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್