ಉಡುಪಿ : ಬ್ರಹ್ಮಗಿರಿ ಲಯನ್ಸ್ ಭವನದ ಬಳಿ ರಾತ್ರಿ 10 ಗಂಟೆಯ ಅನಂತರವೂ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸುತ್ತಿದ್ದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ನೆಮ್ಮದಿಗೆ ಭಂಗವಾಗುತ್ತಿರುವ ಬಗ್ಗೆ ಬಂದ ಮಾಹಿತಿಯನುಸಾರ ರಾತ್ರಿ 10.40ರ ಸುಮಾರಿಗೆ ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲ್ಲಿ ಬೆಳಕಿನ ವ್ಯವಸ್ಥೆಯೊಂದಿಗೆ ಕಾರ್ಯಕ್ರಮ ನಡೆಯುತ್ತಿತ್ತು. ವಿಚಾರಿಸಿದಾಗ ಮಂಜುನಾಥ ಎಂಬವರ ಮೆಹಂದಿ ಕಾರ್ಯಕ್ರಮ ಎನ್ನಲಾಗಿದೆ. ಆ ಬಗ್ಗೆ ಯಾವುದೇ ಪರವಾನಿಗೆ ಪಡೆದುಕೊಂಡಿರಲಿಲ್ಲ. ಪೊಲೀಸರು ಲೈಟ್ ಮತ್ತು ಸೌಂಡ್ ಬಾಕ್ಸ್ ಬಗ್ಗೆ ವಿಚಾರಿಸಿದಾಗ ಸ್ಥಳದಲ್ಲಿದ್ದ ದಾಮೋದರ ಅವರು, ಇದು ಬೈಲೂರಿನ ರವಿ ಎಂಬವರು ನಡೆಸಿಕೊಂಡಿರುವ ಸೌಂಡ್ ಸಿಸ್ಟಮ್ನಲ್ಲಿ ತಾನು ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಪರವಾನಿಗೆ ಇಲ್ಲದೆ ದ್ವನಿವರ್ಧಕವನ್ನು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಬಳಸುತ್ತಿದ್ದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.