ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ

ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು.

ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ ನೀಡಿದವರು.

ಪುತ್ತೂರು ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ಸಂತೋಷ್ ಸರಪಾಡಿ, ಸುರೇಶ್ ಬೆಂಜನಪದವು, ಶಿವಪ್ರಸಾದ್ ತುಂಬೆ ಹಾಗೂ ಭಜರಂಗದಳ ಬಂಟ್ವಾಳ ಪ್ರಖಂಡದ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಟ್ವಾಳ ಬೈಪಾಸ್‌ನಿಂದ ಪ್ರಾರಂಭ‌ಗೊಂಡು ಬಿ.ಸಿ.ರೋಡ್ ನಾರಾಯಣ ಗುರು ವೃತ್ತವಾಗಿ ಸಾಗಿ ಕೈಕಂಬ, ಬ್ರಹ್ಮರಕೂಟ್ಲು ತುಂಬೆ ಜಂಕ್ಷನ್‌ನಿಂದ ಕಡೆಗೋಳಿ ತಲುಪಿ ಅಲ್ಲಿಂದ ಪುನಃ ಅದೇ ಮಾರ್ಗವಾಗಿ ಬಿ.ಸಿ.ರೋಡ್ ರಕ್ತೇಶ್ವರಿ ದೇವಾಸ್ಥಾನದಲ್ಲಿ ಸಂಪನ್ನಗೊಂಡಿತು. ಸಾವಿರಾರು ಭಜರಂಗದಳ ಕಾರ್ಯಕರ್ತರು ಈ ವಾಹನ ಜಾಥಾದಲ್ಲಿ ಪಾಲ್ಗೊಂಡು ದೇಶಭಕ್ತಿ‌ಯ ಘೋಷಣೆಗಳನ್ನು ಕೂಗಿದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ