ವಿಶ್ವಕರ್ಮ ಯಜ್ಞ ಮಹೋತ್ಸವ

ಕೋಟ : ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಸೋಮವಾರ ಜರಗಿತು.

ಪೂರ್ವಾಹ್ನ ಲಕ್ಷ್ಮೀಕಾಂತ್ ಶರ್ಮ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು. ಪೂಜಾ ಕಾರ್ಯದಲ್ಲಿ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ ದಂಪತಿಗಳು ಭಾಗಿಯಾದರು.

ಪೂಜಾ ವಿಧಿ ವಿಧಾನ ಕಾರ್ಯದಲ್ಲಿ ಕೋಟದ ಶ್ರೀ ಗುರುಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ಆಚಾರ್ ಭಾಗಿಯಾದರು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, ಕಲಾ ವೇದಿಕೆ ತಂಡದಿಂದ ನೃತ್ಯ ಗಾನ ವೈಭವ, ಸುವಿನ್ಯ ಆಚಾರ್ ಮಂಗಳೂರು ತಂಡದಿಂದ ಸಂಗೀತ ಕಾರ್ಯಕ್ರಮಗಳು ಜರಗಿದವು.

ಈ ಸಂದರ್ಭದಲ್ಲಿ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಕಾರ್ಯದರ್ಶಿ ಕೇಶವ ಆಚಾರ್, ಕೋಶಾಧಿಕಾರಿ ರಮೇಶ್ ಆಚಾರ್ ಚೇಂಪಿ, ವಿಶ್ಚಕರ್ಮ ಕಲಾವೃಂದದ ಅಧ್ಯಕ್ಷ ವೆಂಕಟೇಶ ಆಚಾರ್ ಸಾಲಿಗ್ರಾಮ, ಕಾರ್ಯದರ್ಶಿ ನಿತ್ಯಾನಂದ ಆಚಾರ್ ಕೋಟ, ಕೋಶಾಧಿಕಾರಿ ರಾಘವೇಂದ್ರ ಆಚಾರ್ ಚೇಂಪಿ, ವಿಶ್ವಜ್ಯೋತಿ ಬಳಗದ ಅಧ್ಯಕ್ಷೆ ಸವಿತಾ ಚಂದ್ರಶೇಖರ್ ಆಚಾರ್, ಕಾರ್ಯದರ್ಶಿ ವಾಣಿ ಸುರೇಶ್ ಆಚಾರ್, ಕೋಶಾಧಿಕಾರಿ ಸುಶೀಲ ಸತೀಶ್ ಆಚಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ