ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ : ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ.

ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ ಹೋಗಬೇಕಿತ್ತು. ಹಗ್ಗದ ಸಹಾಯದಿಂದ ಹೊಳೆ ದಾಟುತ್ತಿದ್ದಾಗ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.

ಇವರು ನಾಡ್ಪಾಲಿನ ಮನೋರಮಾ ಹೆಗ್ಡೆ ಎಂಬವರಿಗೆ ಸೇರಿದ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದರು. ತೋಟದ ಮನೆಯಿಂದ ಹೊಳೆ ದಾಟಿ ಬರಲು ಕಾಲುಸೇತುವೆ ಸಹಿತ ಯಾವುದೇ ಮೂಲ ಸೌಕರ್ಯವನ್ನು ಈ ತನಕ ಕಲ್ಪಿಸಲಾಗಿಲ್ಲ. ಹಾಗಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೆಬ್ರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ