ಹಿಂದೂ ಸಮಾಜ, ಸಂಘಟನೆ ಎಂದರೆ ರೈಗಳಿಗೆ ಅಲರ್ಜಿ ಯಾಕೆ? – ಡಾ. ಭರತ್ ಶೆಟ್ಟಿ ವೈ

ಹಿಂದೂಗಳಿಗೆ ಮಾತ್ರ ಸದಾ ಬುದ್ದಿ ಹೇಳಲು ಬರುವ ಕಾಂಗ್ರೆಸ್ ಮಾಜಿ ಸಚಿವ ರಮಾನಾಥ ರೈಗಳದ್ದು ಮುಸ್ಲಿಂ ಸಮುದಾಯದ ಮೇಲೆ ಕುರುಡು ಪ್ರೇಮ, ಹಿಂದೂ ಸಮಾಜ, ಸಂಘಟನೆ ಎಂದರೆ ಅಲರ್ಜಿ ಎಂದು ಡಾ.ಭರತ್ ಶೆಟ್ಟಿ ಕಿಡಿ ಕಾರಿದ್ದಾರೆ.

ಬಾಂಗ್ಲಾ‌ದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ಹಿಂಸಾಚಾರದ ವಿರುದ್ದ ಹಿಂದೂ ಸೇವಾ ಸಮಿತಿ ಮಂಗಳೂರಿನಲ್ಲಿ ಮಾಡಿದ ಪ್ರತಿಭಟನೆಯನ್ನು ಟೀಕಿಸಿರುವ ರೈಗಳು ಪ್ಯಾಲೆಸ್ತೀನ್ ಪರ ಹೋರಾಟವಾದಾಗ ಇಂತಹ ಬುದ್ದಿ ಮಾತು ತಪ್ಪಿಯೂ ಹೇಳಿಲ್ಲ. ವಕ್ಫ್ ಬೋರ್ಡ್ ಸಮಸ್ಯೆ ಗಂಭೀರವಾಗಿದ್ದರೂ ಹಿಂದೂ ಸಮಾಜದ ಪರವಾಗಿ ಮಾತನಾಡಿಲ್ಲ. ಇದಕ್ಕೆ ಕಾರಣ‌ಕರ್ತರಾದ ಸಚಿವ ಜಮೀರ್ ಅಹ್ಮದ್ ಅವರಿಗೂ ಬುದ್ದಿವಾದ ಹೇಳಿಲ್ಲ. ಕೇವಲ ಹಿಂದೂ ಸಮಾಜ ಮಾತ್ರ ಸಹನೆಯಿಂದ ಇರುವವರು ಎಂಬುದನ್ನು ತಿಳಿದು ಉಚಿತವಾಗಿ ಸಲಹೆ, ಬುದ್ದಿವಾದ ಮಾತು ಹೇಳುದನ್ನು ಇನ್ನಾದರೂ ರಮಾನಾಥ ರೈಗಳು ನಿಲ್ಲಿಸಿ, ಇತರ ಸಮಾಜವನ್ನೂ ತಿದ್ದುವ ಕೆಲಸ ಮಾಡಲಿ ಎಂದು ತಿರುಗೇಟು ಕೊಟ್ಟಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ