ಉಡುಪಿ-ಚಿಕ್ಕಮಗಳೂರು ಮತ ಎಣಿಕೆ ಕೇಂದ್ರದ ಸುತ್ತ ವ್ಯಾಪಕ ಬಂದೋಬಸ್ತ್ – ಎಸ್ಪಿ ಡಾ.ಅರುಣ್

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ನಾಳೆ ಬೆಳಿಗ್ಗೆ ಉಡುಪಿ ನಗರದ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದ್ದು ಈ ಸಂಬಂಧ ವ್ಯಾಪಕ ಬಂದೋಬಸ್ತ್ ಕೈಗೊಂಡಿರುವುದಾಗಿ ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ.

ಕೌಂಟಿಂಗ್ ಸೆಂಟರ್ ಸುತ್ತ ಭದ್ರತೆಗಾಗಿ ಸುಮಾರು 350 ಪೊಲೀಸರನ್ನು ನಿಯೋಜಿಸಲಾಗಿದೆ. 1 ಕೆಎಸ್‌ಆರ್‌ಪಿ ಮತ್ತು 1 ಡಿಎಆರ್ ಜೊತೆಗೆ ಒಂದು ಅಗ್ನಿಶಾಮಕ ವಾಹನವು ಸ್ಥಳದಲ್ಲಿ ಕಾರ್ಯಾಚರಿಸಲಿವೆ.

ಬಂದೋಬಸ್ತ್ ಉದ್ದೇಶದಿಂದ ಜಿಲ್ಲೆಯಾದ್ಯಂತ ಸೂಕ್ಷ್ಮ ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಸುಮಾರು 400 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಜಿಲ್ಲೆಯ ವಿವಿಧೆಡೆ 3 ಕೆಎಸ್‌ಆರ್‌ಪಿ ಮತ್ತು 3 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿ ಸಂಪರ್ಕಿಸುವಂತೆ ಎಸ್ಪಿ ಡಾ. ಅರುಣ್ ಕೆ.ಮನವಿ ಮಾಡಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ