ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು…

ಉಡುಪಿ : ಕಟ್ಟಡವೊಂದರ ಮೇಲೆ ಸೋಲಾರ್ ಪ್ಯಾನೆಲ್ ಸ್ವಚ್ಛಗೊಳಿಸುವಾಗ ಕಾರ್ಮಿಕರೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಾ.4ರಂದು ಬೆಳಗ್ಗೆ ನಿಟ್ಟೂರು ಎಂಬಲ್ಲಿ ನಡೆದಿದೆ.

ಮೃತರನ್ನು ಬಾಗಲಕೋಟೆ ಮೂಲದ ಹನುಮಂತ ಪುಂಡಲಿಕ ರುಗಿ ಎಂದು ಗುರುತಿಸಲಾಗಿದೆ. ಇವರು ಉಡುಪಿ ಬಾಳಿಗಾ ಫಿಶ್‌ನೆಟ್‌ನ ಪ್ರೊಸೆಸಿಂಗ್ ಯುನಿಟ್‌ನ ಮಾಡಿನ ಮೇಲೆ ಸೋಲಾರ್ ಪ್ಯಾನಲ್ ಸ್ವಚ್ಚಗೊಳಿಸುವಾಗ ಅಕಸ್ಮಿಕವಾಗಿ ಮಾಡಿನ ಮೇಲಿನಿಂದ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ