ನಾಗರ ಪಂಚಮಿಯಂದು ಜೀವಂತ ನಾಗನಿಗೆ ಪೂಜೆ

ಉಡುಪಿಯ ಕಾಪು ಮಜೂರಿನಲ್ಲಿರುವ ಗೋವರ್ಧನ್ ರಾವ್ ಅವರ ಮನೆಯಲ್ಲಿ ನಾಗರ ಪಂಚಮಿಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೀವಂತ ನಾಗರ ಹಾವಿಗೆ ಪೂಜೆ ಸಲ್ಲಿಸಲಾಯಿತು, ಹಾವುಗಳಿಗೆ ಜಲಾಭೀಷೇಕ ಮತ್ತು ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಲಾಯಿತು.

ಗೋವರ್ಧನ್ ರಾವ್ ಹಾವುಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿ. ಗಾಯಗೊಂಡ ಹಾವುಗಳನ್ನು ಚಿಕಿತ್ಸೆ ನೀಡಿ, ಅವುಗಳ ಆರೈಕೆಯಲ್ಲಿ ತೊಡಗಿರುವ ಅವರು, ಈಗಾಗಲೇ ಆರು ಹಾವುಗಳನ್ನು ಆರೈಕೆ ಮಾಡುತ್ತಿದ್ದಾರೆ.

ವಾಹನಗಳ ಅಡಿಗೆ ಸಿಲುಕಿದ, ನಾಯಿ ಕಡಿತಕ್ಕೆ ತುತ್ತಾದ, ಅಥವಾ ಇತರ ಪ್ರಾಣಿಗಳಿಂದ ಗಾಯಗೊಂಡ ಹಾವುಗಳಿಗೆ ಗೋವರ್ಧನ್ ರಾವ್ ಚಿಕಿತ್ಸೆ ನೀಡುತ್ತಿದ್ದು, ನಾಗರ ಪಂಚಮಿಯಂದು ಹಾವು ಇದ್ದರೆ ಅದಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಅವರು ಮುಂದುವರಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ