ಬೀಜಾಡಿಯಲ್ಲಿ ಸಮುದ್ರಪಾಲಾದ ಯುವಕ : ಎಸ್ಪಿಗೆ ಮನವಿ

ಉಡುಪಿ : ಬೀಜಾಡಿಯಲ್ಲಿ ನಡೆದ ದುರಂತದಲ್ಲಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ನಿವಾಸಿ ರಾಜೇಶ್ ಟೈಲರ್ ಎಂಬವರ ಮಗ ಯೋಗೇಶ್ (22) ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತ ದೇಹ ಇದುವರೆಗೂ ಸಿಗಲಿಲ್ಲ. ಅವರ ಮೃತದೇಹ ಶೀಘ್ರ ಹುಡುಕಿಕೊಡುವಂತೆ ಆಗ್ರಹಿಸಿ ಇಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಷನ್ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ, ದಯಾನಂದ್ ಕೋಟ್ಯಾನ್ ಕೊರಂಗ್ರಪಾಡಿ, ರಾಜ್ಯ ಸಮಿತಿಯ ಕಾರ್ಯದರ್ಶಿ ಶಾಂತ ಬಸ್ರೂರು, ಉಡುಪಿ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಸುರೇಶ್ ಪಾಲನ್, ಪ್ರಧಾನ ಕಾರ್ಯದರ್ಶಿ ದಯಾನಂದ ಪ್ರಭು ಹಿರಿಯಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ