ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ.

ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್ ರೈಲ್ವೆ ನಿಲ್ದಾಣಕ್ಕೆ ಬಂದ ಸಂದರ್ಭ ಬೈಕ್ ಕಾಣೆಯಾಗಿದೆ. ಕೂಡಲೇ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದಾಗ, 11 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕನ್ನು ಕದಿಯುವ ದೃಶ್ಯ ದಾಖಲಾಗಿದೆ.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್ ಕಳ್ಳರಿಗಾಗಿ ಪೊಲೀಸರು ಶೋಧ ಶುರು ಮಾಡಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ